ಪು.ತಿ.ನ. ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಪುರೋಹಿತ ತಿರುನಾರಾಯಣಯ್ಯಂಗಾರ್ಯನರಸಿಂಹಾಚಾರ್ಯ ಕ್ರಿ.ಶ.೧೯೦೬ ರಲ್ಲಿ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಜನಿಸಿದರು. ಇವರು ಅಹಲ್ಯೆ ,ಶಬರಿ ,ವಿಕಟಕವಿವಿಜಯ ,ಹಂಸದಮಯಂತಿ ಮತ್ತು ಇತರ ರೂಪಕಗಳು,ಹಣತೆ,ರಸಸರಸ್ವತಿ,ಗಣೇಶದರ್ಶನ ,ಶಾರದಯಾಮಿನಿ,ಶ್ರೀಹರಿಚರಿತೆ,ರಥಸಪ್ತಮಿ ಮೊದಲಾದ ಕೃತಿಗಳನ್ನು ಬರೆದಿದ್ದಾರೆ.ಇವರ ಹಂಸ ದಮಯಂತಿ ಮತ್ತು ಇತರ ರೂಪಕಗಳು ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ,ಶ್ರೀ ಹರಿಚರಿತೆ ಕಾವ್ಯಕ್ಕೆ ಪಂಪ ಪ್ರಶಸ್ತಿ, ಲಭಿಸಿದೆ. ಮೈಸೂರು ವಿಶ್ವವಿದ್ಯಾಲಯ ಇವರಿಗೆ ಗೌರವ ಡಿ.ಲಿಟ್ ಪದವಿ ನೀಡಿ ಗೌರವಿಸಿದೆ.